March 14, 2025

ತೀರ್ಥಹಳ್ಳಿ ಮೂಲದ ನಟೋರಿಯಸ್ ಕದೀಮರ ಬಂಧನ, ಬರೋಬ್ಬರಿ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನಭರಣವನ್ನು ಜಪ್ತಿ.!

Spread the love



ಮಲೆನಾಡಿಗೆ ಸೇರಿದ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ಮತ್ತು ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶ ಪಡಿಸಿ ಕೊಂಡಿದ್ದಾರೆ.



ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ  ಹಾಗೂ ಚಿಕ್ಕಮಗಳೂರು ಮೂಲದ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ ಕಾರುಗಳು ಹಾಗೂ ಬರೋಬ್ಬರಿ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನಭರಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.



ತೀರ್ಥಹಳ್ಳಿ ಮೂಲದ ಹಮ್ಜಾ ಅಲಿಯಾಸ್ ಅಮೀರ್(39)‌ ಚಿಕ್ಕಮಗಳೂರಿನ ಕಡೂರು ಸಾಧಿಕ್(40) ಬಂಧಿತರಾಗಿದ್ದಾರೆ.ಆರೋಪಿಗಳು ನಕಲಿ ಪಾಸ್ಪೋರ್ಟ್ ಬಳಸಿ ಬಹ್ರೇನ್ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಮಾಹಿತಿ ಅರಿತ ಮಾಗಡಿ ಪೊಲೀಸರು ಮುಂಬೈ ಏರ್ಪೋರ್ಟ್ ಬಳಿ ನಟೋರಿಯಸ್ ಕಳ್ಳರ ಎಡೆಮುರಿ ಕಟ್ಟಿದ್ದಾರೆ.



ನಾಲ್ವರು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ

ಆರೋಪಿಗಳನ್ನು ಹಿಡಿಯಲಾಗಿದೆ. ಸದ್ಯ ಮಾಗಡಿ ಪೊಲೀಸರ ಕಾರ್ಯಾಚರಣೆಗೆ ಮುಂಬೈ ಪೊಲೀಸರು ಶಾಕ್ ಆಗಿದ್ದಾರೆ.
ಬಂಧಿತರಿಬ್ಬರು ಸುಮಾರು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಕಲಿ ಪಾಸ್ಪೋರ್ಟ್ ಬಳಸಿ ಏರ್ಪೋರ್ಟ್ ಪೊಲೀಸರನ್ನೇ ಯಾಮಾರಿಸಿದ್ದರು. ಇಬ್ಬರು ಆರೋಪಿಗಳ ಬಳಿ 1 ಗನ್ ಹಾಗೂ 5 ಜೀವಂತ ಗುಂಡು, 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 11,49,000 ನಗದು ಜಪ್ತಿ ಮಾಡಲಾಗಿದೆ.



ಸೆ.22 ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ ದೋಚಿಕೊಂಡು ಪರಾರಿಯಾಗಿದ್ದರು ಹಾಗೂ ಬ್ಯಾಡಗಿ ಶಾಸಕರ ನಿವಾಸದಲ್ಲೂ ಬಂಧಿತ ಕಳ್ಳರು ಕೈ ಚಾಲಕ ತೋರಿದ್ದರು.



ಆರೋಪಿಗಳ ಸೆರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ ಯವರು 4 ತಂಡಗಳನ್ನು ರಚಿಸಿದ್ದರು. ಜಿಲ್ಲೆಯ ಮಾಗಡಿ ಠಾಣೆಯ ಇನ್ಸ್ಪೆಕ್ಟರ್ ಜಿ.ವೈ.ಗಿರಿರಾಜ್, ಕುಂಬಳಗೋಡು ಇನ್ಸ್ಪೆಕ್ಟರ್ ಮಂಜುನಾಥ್, ತಾವರೆಕೆರೆ ಪಿಐ ಮೋಹನ್, ಕುದೂರು ಠಾಣೆಯ ಇನ್ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 25 ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಈ ಕಳ್ಳರು ಬಿಎಂಡಬ್ಲ್ಯು, ಸ್ಕೋಡಾ, ಎಸ್ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್ ದೇಶಕ್ಕೆ ತೆರಳಲು ಮುಂದಾಗಿದ್ದಾರೆ.


ಪೊಲೀಸರನ್ನು ಕಂಡು ಗನ್ ತೆಗೆಯಲು ಯತ್ನಿಸಿದ್ದ ವೇಳೆ ಇಬ್ಬರ ಬಂಧನ ಮಾಡಲಾಗಿದೆ. ಕಳ್ಳರ ಹಿಸ್ಟರಿ ನೋಡಿ ಮುಂಬೈ ಪೊಲೀಸರಿಂದ ಏರ್ಪೋರ್ಟ್ನಲ್ಲಿ ತಪಾಸಣೆ ಮಾಡಲಾಗಿದ್ದು, ಈ ಹಿಂದೆ ಹಲವು ಬಾರಿ ಬೇರೆ ಬೇರೆ ದೇಶಗಳಿಗೆ ತೆರಳಿದ್ದು ಗೊತ್ತಾಗಿದೆ. ಸದ್ಯ ಕಳ್ಳರನ್ನು ಸೆರೆಹಿಡಿದ ಪೊಲೀಸರಿಗೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿಯವರು 20 ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ.

ವಿಶೇಷ ಪ್ರಕರಣ ಎಂದು ಪರಿಗಣಿಸಿ ಸನ್ಮಾನ ಮಾಡುವಂತೆ ಎಸ್ಪಿಯಿಂದ ಪತ್ರ ಬರೆಯಲಾಗಿದೆ….