March 14, 2025

ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ…!

Spread the love



ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆಗೆ ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ 2024ರ ಡಿಸೆಂಬರ್ 27ರಂದು (ಶುಕ್ರವಾರ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ಈ ಸಾರ್ವಜನಿಕ ರಜೆಯು ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರದ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಅನ್ವಯಿಸುತ್ತದೆ. ಇದೇ ಸಂದರ್ಭದಲ್ಲಿ, ಡಿಸೆಂಬರ್ 26ರಿಂದ 2025ರ ಜನವರಿ 1ರವರೆಗೆ (7 ದಿನಗಳು) ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುವುದು.



ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಸರಕಾರದ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

ನಿಗದಿತ ದಿನಾಂಕಕ್ಕೆ ಸಂಬಂಧಿಸಿದಂತೆ ಈ ರಜೆ ನೆಗೋಶಿಯಬಲ್ ಇನ್ಸುಮೆಂಟ್ ಆಕ್ಟ್, 1881 ರ ಪ್ರಕಾರ ಮಾನ್ಯತೆ ಪಡೆದಿರುವುದಾಗಿ ಘೋಷಿಸಲಾಗಿದೆ.


ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಶೋಕಾಚರಣೆಯಲ್ಲಿ ಪಾಲ್ಗೊಳ್ಳಬೇಕಾಗಿ ಕೋರಲಾಗಿದೆ.