March 14, 2025

ಚಿಕ್ಕಮಗಳೂರು: ಶಿಡ್ಲೆ ಬಳಿ ಮುಖಾಮುಖಿ ಅಪಘಾತ, ಮಹಿಳೆ ಸಾವು…!?

Spread the love



ಚಿಕ್ಕಮಗಳೂರು ಜಿಲ್ಲೆಯ ಮೆಣಸೆ ಗ್ರಾಪಂ ಶಿಡ್ಲೆ ಬಳಿ ಪ್ರವಾಸಿಗರ ವಾಹನಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಮಿಳುನಾಡಿನ ಧರ್ಮಪುರಿಯ ಭುವನ (65) ಎಂಬ ಮಹಿಳೆ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ದುರಂತದಲ್ಲಿ, ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಟಿಟಿ ವಾಹನ ಮತ್ತು ಶೃಂಗೇರಿಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಎರಡೂ ವಾಹನಗಳು ಗಂಭೀರವಾಗಿ ಹಾನಿಗೊಳಗಾಗಿವೆ. ಸ್ಥಳೀಯರು ಮತ್ತು ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲು ನೆರವಾದರು. ಈ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ.